Skip to main content

Posts

Showing posts from August, 2018

ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು : Ayshwarya Syndicate

॥ ವರಮಹಾಲಕ್ಷ್ಮಿ ಹಬ್ಬಕ್ಕೆ ಒಂದು ಸಣ್ಣ ಕಥೆ ॥ ಓರ್ವ ಸಿರಿವಂತ ಅವನಿಗೆ ನಾಲ್ಕು ಜನ ಮಕ್ಕಳು. ನಾಲ್ಕು ಜನ ಸೊಸೆಯಂದಿರು ಸಿರಿ - ಸಂಪದ ಯಾವುದಕ್ಕೂ ಕೊರತೆ ಇರಲಿಲ್ಲ . ಒಂದು ದಿನ ರಾತ್ರಿ ಸಿರಿವಂತನು ಮಲಗಿರುವಾಗ ವಿಚಿತ್ರ ಕನಸು ಕಂಡ ಮನೆಯ ಭಾಗ್ಯಲಕ್ಷ್ಮಿ ಹೊರಗೆ ಹೋಗುತ್ತಿದ್ದಳು ಅವರೀರ್ವರ ಮಧ್ಯದಲ್ಲಿ ಸಂಭಾಷಣೆ ನಡೆಯಿತು . ಲಕ್ಷ್ಮಿ - ಸಿರಿವಂತನೆ ನಾನು ಈಗ ಹೊರಗೆ ಹೋಗುತ್ತಿದ್ದೇನೆ ನಿನಗೆ ಏನು ವರ ಬೇಕು ಬೇಡು ಕೊಡುತ್ತೇನೆ ಸಿರಿವಂತ - ಈಗ ಈ ಮನೆಯ ಹೊಣೆಯನ್ನು ನನ್ನ ಮಕ್ಕಳು ಮತ್ತು ಸೊಸೆಯಂದಿರು ವಹಿಸಿಕೊಂಡಿದ್ದಾರೆ ಅವರಿಗೆ ಕೇಳಿ ಹೇಳುತ್ತೇನೆ . ಲಕ್ಷ್ಮಿ - ಆಗಲಿ ಅವರಿಗೆ ಕೇಳಿ ನನಗೆ ತಿಳಿಸು . ಮರುದಿನ ಮುಂಜಾನೆ ಸಿರಿವಂತನು ತನ್ನ ಮಕ್ಕಳಿಗೆ ಕರೆದು ನಡೆದ ಸಂಗತಿಯನ್ನು ಹೇಳಿದ ಅದನ್ನು ಕೇಳಿ ಹಿರಿಯ ಮಗ ಹೇಳಿದ - ನೂರು ಜನ್ಮ ಕುಳಿತು ಉಂಡರು ಸವೆಯಲಾಗದಷ್ಟು ಸಿರಿ ಸಂಪತ್ತು ಕೇಳು . ಎರಡನೆಯ ಮಗ ಹೇಳಿದ - ಸಂಪತ್ತು ಸ್ಥಿರವಲ್ಲ ಯಾರಾದರೂ ಕಳವು ಮಾಡಬಹುದು ಅಲ್ಲವೇ ಕಸಿದುಕೊಳ್ಳಬಹುದು ಭೂಮಿಯನ್ನು ಮಾತ್ರ ಯಾರೂ ಕಳವು ಮಾಡಲಾರರು ಕಸಿದುಕೊಳ್ಳಲಾರರು ಸಾವಿರಾರು ಎಕರೆ ಭೂಮಿಯನ್ನೇ ಕೇಳಿ ಬಿಡಿ ಮೂರನೇ ಮಗ ಹೇಳಿದ - ಈ ಸಿರಿ ಸಂಪದ ಭೂಮಿ ಸೀಮೆ ಏನು ಮಾಡುವುದು ನಮ್ಮ ಕೈಯಲ್ಲಿ ಅಧಿಕಾರ ಇಲ್ಲದಿದ್ದರೆ ಸಿರಿ ಸಂಪದ ಭೂಮಿ ಸೀಮೆ ಯಾವುದೂ ಸ್ಥಿರವಲ್ಲ ಆದುದರಿಂದ ಎಂದೆಂದಿಗೂ ನಮ್ಮ ಕೈ ಬಿಡಲಾರದಂಥ ಅಧಿಕಾರವನ್ನೇ